ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
TSK
TSK · ಯಾಜಕಕಾಂಡ 25:43
Treasury of Scripture Knowledge references in ಕನ್ನಡ IRV.
¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.
ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.
ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.
ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?
ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು?
“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.