ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.
TSK
TSK · ಯಾಜಕಕಾಂಡ 26:16
Treasury of Scripture Knowledge references in ಕನ್ನಡ IRV.
ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.
¶ ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.
ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.
ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.
¶ “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
¶ ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.