TSK

TSK · ಯಾಜಕಕಾಂಡ 26:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.

ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ

¶ “ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,

ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.

ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.

¶ ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:

ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.

ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.

¶ “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.