TSK

TSK · ಯಾಜಕಕಾಂಡ 26:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.

ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.

¶ ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.

ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,

ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.

ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.

ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”

ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.