ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
TSK
TSK · ಯಾಜಕಕಾಂಡ 26:22
Treasury of Scripture Knowledge references in ಕನ್ನಡ IRV.
“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.
ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.