ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
TSK
TSK · ಯಾಜಕಕಾಂಡ 26:31
Treasury of Scripture Knowledge references in ಕನ್ನಡ IRV.
ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.
ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.
ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.
ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.
¶ “‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.
ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!
“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.
¶ ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.