¶ ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.
TSK
TSK · ಯಾಜಕಕಾಂಡ 26:41
Treasury of Scripture Knowledge references in ಕನ್ನಡ IRV.
ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.
ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.
ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.
ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.
ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.
¶ “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.
ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.
‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.
ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.
‹ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.›
‹ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.
ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.
ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.