¶ ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
TSK
TSK · ಯಾಜಕಕಾಂಡ 26:44
Treasury of Scripture Knowledge references in ಕನ್ನಡ IRV.
ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.
ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.
ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
“ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.