¶ “‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
TSK
TSK · ಯಾಜಕಕಾಂಡ 26:5
Treasury of Scripture Knowledge references in ಕನ್ನಡ IRV.
ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”
ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.
ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.
¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›
ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.