TSK

TSK · ಯಾಜಕಕಾಂಡ 27:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.

¶ “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.

“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.

ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.