¶ “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
TSK
TSK · ಯಾಜಕಕಾಂಡ 3:8
Treasury of Scripture Knowledge references in ಕನ್ನಡ IRV.
ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.
ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.
¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.