ವಿಮೋಚನಕಾಂಡ 29:14
TSK
ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.
TSK
Treasury of Scripture Knowledge references in ಕನ್ನಡ IRV.
ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.
ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.
ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.
ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.