TSK

TSK · ಯಾಜಕಕಾಂಡ 4:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,

ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.

ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.

ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.

ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.