TSK

TSK · ಯಾಜಕಕಾಂಡ 4:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,

ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.

¶ “ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.

ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.

¶ ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.

‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.

ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.