TSK

TSK · ಯಾಜಕಕಾಂಡ 4:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.

ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

¶ ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.

ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.

ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.

ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.