TSK

TSK · ಯಾಜಕಕಾಂಡ 4:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,

ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.

ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.

ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.

ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,

¶ “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು