TSK

TSK · ಯಾಜಕಕಾಂಡ 4:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.

¶ “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.

ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”

¶ “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.

ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.

ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.