ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
TSK
TSK · ಯಾಜಕಕಾಂಡ 4:30
Treasury of Scripture Knowledge references in ಕನ್ನಡ IRV.
ಯಾಜಕಕಾಂಡ 4:7
TSK
ಯಾಜಕಕಾಂಡ 4:34
TSK
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯಾಜಕಕಾಂಡ 8:15
TSK
ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
ಯೆಶಾಯ 42:21
TSK
ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.