ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
TSK
TSK · ಯಾಜಕಕಾಂಡ 4:35
Treasury of Scripture Knowledge references in ಕನ್ನಡ IRV.
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.
ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.
ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
¶ ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,
ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.
¶ ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.