ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.
TSK
TSK · ಯಾಜಕಕಾಂಡ 5:1
Treasury of Scripture Knowledge references in ಕನ್ನಡ IRV.
“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.
¶ “ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,
ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು
ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.