TSK

TSK · ಯಾಜಕಕಾಂಡ 5:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.

ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.

ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.

ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.