ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
TSK
TSK · ಯಾಜಕಕಾಂಡ 5:16
Treasury of Scripture Knowledge references in ಕನ್ನಡ IRV.
ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.
ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.
ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.
ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,