TSK

TSK · ಯಾಜಕಕಾಂಡ 6:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.

ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,

ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.

ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.

ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.