ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
TSK
TSK · ಯಾಜಕಕಾಂಡ 6:3
Treasury of Scripture Knowledge references in ಕನ್ನಡ IRV.
¶ ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.
ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.
¶ ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.
ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.