ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.
TSK
TSK · ಯಾಜಕಕಾಂಡ 6:4
Treasury of Scripture Knowledge references in ಕನ್ನಡ IRV.
ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.
ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.
ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.
ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.