¶ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.
TSK
TSK · ಯಾಜಕಕಾಂಡ 6:9
Treasury of Scripture Knowledge references in ಕನ್ನಡ IRV.
ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.
¶ “‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.