¶ “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
TSK
TSK · ಯಾಜಕಕಾಂಡ 7:1
Treasury of Scripture Knowledge references in ಕನ್ನಡ IRV.
ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.
¶ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.
ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.