TSK

TSK · ಯಾಜಕಕಾಂಡ 7:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.

ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.

ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.

ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?

ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.

ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.

ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.

ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.

ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.