¶ “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.
TSK
TSK · ಯಾಜಕಕಾಂಡ 7:18
Treasury of Scripture Knowledge references in ಕನ್ನಡ IRV.
ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”
¶ “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
¶ “‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.
ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.
ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.
ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.