ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
TSK
TSK · ಯಾಜಕಕಾಂಡ 8:31
Treasury of Scripture Knowledge references in ಕನ್ನಡ IRV.
“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು.
‹ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.›
‹ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು”› ಎಂದು ಹೇಳಿದನು.
ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.