¶ “‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
TSK
TSK · ಯಾಜಕಕಾಂಡ 9:15
Treasury of Scripture Knowledge references in ಕನ್ನಡ IRV.
¶ ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,
ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.