ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.
TSK
TSK · ಲೂಕನು 1:17
Treasury of Scripture Knowledge references in ಕನ್ನಡ IRV.
ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.
ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.
ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
“ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!
¶ ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
‹ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.›
ಯೇಸು ಅವರಿಗೆ,‹“ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.›
ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,
ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
¶ ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
¶ ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.