ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
TSK
TSK · ಲೂಕನು 1:20
Treasury of Scripture Knowledge references in ಕನ್ನಡ IRV.
ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
¶ ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”
ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›