TSK

TSK · ಲೂಕನು 1:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.

¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

¶ ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.

‹ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.›

ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.

ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,

‹ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.›

‹ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.›

ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ‹ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು› ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.

¶ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.

ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.