ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
TSK
TSK · ಲೂಕನು 1:51
Treasury of Scripture Knowledge references in ಕನ್ನಡ IRV.
ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.
ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.
ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?
ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.
ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.”
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”