TSK

TSK · ಲೂಕನು 1:79

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”

ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.

ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?

ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.

ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.

ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.

“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.

ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.

ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.

‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.

ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.

ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.

‹ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.›

ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.