¶ ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
TSK
TSK · ಲೂಕನು 10:13
Treasury of Scripture Knowledge references in ಕನ್ನಡ IRV.
ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
¶ ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
¶ ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”