ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
TSK
TSK · ಲೂಕನು 10:2
Treasury of Scripture Knowledge references in ಕನ್ನಡ IRV.
ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.
ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.
ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.
ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”
ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
‹ಅದು›‹ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ”› ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
‹‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.›
¶ ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
¶ ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‹‘ನೀನು ಹಿಂಸೆಪಡಿಸುವ ಯೇಸುವೇ ನಾನು.›
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
¶ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.
ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
¶ ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
¶ ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.
ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
¶ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,
¶ ‹“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,›‹ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು›‹ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,›