¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
TSK
TSK · ಲೂಕನು 11:13
Treasury of Scripture Knowledge references in ಕನ್ನಡ IRV.
ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
‹ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.›
‹ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!›
‹ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?›
‹ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.›
ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.
ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.