TSK

TSK · ಲೂಕನು 11:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು.

ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.

ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.

ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.

¶ ‹“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.›

ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, ‹“ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ”› ಅಂದನು.

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.