ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
TSK
TSK · ಲೂಕನು 11:34
Treasury of Scripture Knowledge references in ಕನ್ನಡ IRV.
ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?
ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
‹“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ,› ‹ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ,› ‹ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”›
‹ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?›
ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.