ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
TSK
TSK · ಲೂಕನು 12:1
Treasury of Scripture Knowledge references in ಕನ್ನಡ IRV.
ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?
¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
ಯೇಸು ಅವರಿಗೆ, ‹“ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ”› ಎಂದು ಎಚ್ಚರಿಸಿದನು.
ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.
‹ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು”› ಎಂದು ಹೇಳಿದನು.
¶ ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;
¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.