TSK

TSK · ಲೂಕನು 12:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.

ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.

ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.

ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.

ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.

ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.

¶ ‹“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.›

‹ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.›

¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›

ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.

ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.