TSK

TSK · ಲೂಕನು 13:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.

ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, ‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.

ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.

¶ ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,

ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.

ಆತನು ಅವರಿಗೆ, ‹“ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.›‹ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,›

ಕರ್ತನು, ‹“ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು”› ಅಂದನು.

ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.

¶ ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.

¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.