ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
TSK
TSK · ಲೂಕನು 13:34
Treasury of Scripture Knowledge references in ಕನ್ನಡ IRV.
ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.
ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.
‹ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.›
‹ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.›
‹ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.›
ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
¶ ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,
ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.