ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.
TSK
TSK · ಲೂಕನು 15:10
Treasury of Scripture Knowledge references in ಕನ್ನಡ IRV.
ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.
‹ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ›‹ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.›
ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
‹ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ”› ಅಂದನು.
‹ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.›
ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?