ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು.
TSK
TSK · ಲೂಕನು 15:13
Treasury of Scripture Knowledge references in ಕನ್ನಡ IRV.
ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
ಕೆಲಸಗಳ್ಳನು ಕೆಡುಕನಿಗೆ ತಮ್ಮ.
ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.
ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.
ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.
ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.
‹ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.›
¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›
ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.
ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.