ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
TSK
TSK · ಲೂಕನು 15:18
Treasury of Scripture Knowledge references in ಕನ್ನಡ IRV.
¶ ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.
ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ.
ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
‹ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,›
‹ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?›
¶ ‹ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,›
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.