ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
TSK
TSK · ಲೂಕನು 15:29
Treasury of Scripture Knowledge references in ಕನ್ನಡ IRV.
ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?
‹ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.›
¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
‹‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ”› ಎಂದು ಹೇಳಿದನು.
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›‹ಯಾವನು ಜಯಹೊಂದುತ್ತಾನೋ ಅವನಿಗೆ›‹ಬಚ್ಚಿಟ್ಟಿರುವ›‹ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ›‹ಹೊಸ ಹೆಸರನ್ನೂ ಕೊಡುವೆನು.›‹ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.›