ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
TSK
TSK · ಲೂಕನು 15:5
Treasury of Scripture Knowledge references in ಕನ್ನಡ IRV.
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.
ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
‹ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.›
ಇದನ್ನು ಕೇಳಿ ಯೇಸು, ‹“ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.›
ಯೇಸು ಅವರಿಗೆ ‹“ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.›
¶ ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;
ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.